ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಸೀಟು ಹಂಚಿಕೆ ಒಪ್ಪಂದದ ಪ್ರಕಾರ,ಬಳ್ಳಾರಿ, ಶಿವಮೊಗ್ಗ ಮತ್ತು ಜಮಖಂಡಿ ಕ್ಷೇತ್ರಗಳಿಂದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ರಾಮನಗರ ಮತ್ತು ಮಂಡ್ಯ ಕ್ಷೇತ್ರ ಗಳಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವಂತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಯಡಿಯೂರಪ್ಪ ಪುತ್ರನ ವಿರುದ್ಧ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡುವುದು ಕಠಿಣವಾಗಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ, ಸಿ ವೇಣುಗೋಪಾಲ್ ಹೇಳಿದ್ದರು,