ಒಂದು ವೇಳೆ ಶಿವಮೊಗ್ಗದಿಂದ ಸ್ಪರ್ಧಿಸಲು ಮಧು ಬಂಗಾರಪ್ಪ ನಿರಾಕರಿಸಿದರೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ, ಹಾಗೂ ಬಳ್ಳಾರಿಯಲ್ಲೂ ಕೂಡ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ ಎಂದು ಘೋಷಿಸಿದ್ದಾರೆ, ಎಲ್ಲಾ ಐದು ಕ್ಷೇತ್ರಗಳಲ್ಲೂ ಒಟ್ಟೊಟ್ಟಿಗೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ, ದೇಶಾದ್ಯಂತ ಕೇಸರಿ ಪಕ್ಷ ಕೋಮು ಸಂಘರ್ಷ ಮೂಡಿಸುತ್ತಿದೆ ಎಂದು ಆರೋಪಿಸಿದ್ದಾರೆ.