ಇಂದು ಶಿರಸಿಯಲ್ಲಿ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅನಂತಕುಮಾರ್ ಹೆಗಡೆ, ನಾವು ಬಂದಿರುವುದೇ ರಾಜಕಾರಣ ಮಾಡುವುದಕ್ಕೆ. ರಾಜಕಾರಣ ಬಿಟ್ಟು ಬೇರೆನು ಮಾಡಬೇಕು. ರಾಜಕಾರಣ ಮಾಡುವುದಕ್ಕಾಗಿ ನಾವು ತಾಲೂಕು ಅಧ್ಯಕ್ಷ ಆಗಿದ್ದು, ತಾಲೂಕು ಪ್ರಮುಖ್ ಆಗಿದ್ದು, ಜಿಲ್ಲಾ ಪ್ರಮುಖ್ ಆಗಿದ್ದು. ನಾವೇನು ಇಲ್ಲಿ ಸಮಾಜ ಸೇವೆ ಮಾಡಲು ಬಂದು ಕುಳಿತಿಲ್ಲ ಎಂದರು. ಅಲ್ಲದೆ ನನ್ನ ಈ ಹೇಳಿಕೆಯನ್ನು ಮಾಧ್ಯಮದವರು ಹೇಗೆ ಬೇಕಾದರೂ ಬರೆಯಲಿ. ಅದು ಅವರವರ ಭಾವಕ್ಕೆ ಅವರವರ ಭಕುತಿಗೆ ಬಿಟ್ಟಿದ್ದು ಎಂದರು.