ಮಂಡ್ಯದಿಂದ ಸ್ಪರ್ಧಿಸಲು ಆರ್.ಅಶೋಕ್ ಹಿಂದೇಟು: ಬಿಜೆಪಿಯಿಂದ ಡಾ. ಸಿದ್ದರಾಮಯ್ಯ ಕಣಕ್ಕೆ

ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಬಿಜೆಪಿಯಿಂದ ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಡಾ. ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದಾರೆ....
ಆರ್. ಅಶೋಕ
ಆರ್. ಅಶೋಕ
Updated on
ಬೆಂಗಳೂರು/ ಶಿವಮೊಗ್ಗ: ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಬಿಜೆಪಿಯಿಂದ ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಸಿದ್ದರಾಮಯ್ಯ ಕಣಕ್ಕಿಳಿಯಲಿದ್ದಾರೆ.
ಮಾಜಿ ಸಚಿವ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಅವರನ್ನು ಓಲೈಸಲು ಬಿಜೆಪಿ ವಿಫಲವಾಗಿದೆ. ಹಾಗೂ ಮಾಜಿ ಡಿಸಿಎಂ ಆರ್. ಅಶೋಕ್ ಕೂಡ ಸ್ಪರ್ಧಿಸಲು ನಿರಾಕರಿಸಿದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ,
ಎಲ್ಲ ಪ್ರಮುಖರೊಂದಿಗೆ ಚರ್ಚಿಸಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಡಾ.ಸಿದ್ದರಾಮಯ್ಯ ಅವರೇ ಬಿಜೆಪಿ ಅಭ್ಯರ್ಥಿ ಎಂದು ನಿರ್ಧರಿಸಲಾಗಿದೆ. ಕೇಂದ್ರಕ್ಕೆ ಅವರ ಹೆಸರು ಶಿಫಾರಸು ಮಾಡಲಾಗುತ್ತದೆ ಎಂದು ಶಿಕಾರಿಪುರದಲ್ಲಿ ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿಗೆ ಸೇರ್ಪಡೆಯಾದ ಬಳಿಕ ಸಿದ್ದರಾಮಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಸೇವೆ ನೋಡಿ ಈ ಪಕ್ಷದಲ್ಲಿ ಗುರುತಿಸಿಕೊಳ್ಳುವ ಆಸೆಯಿತ್ತು.. ಈಗ ಸೇವೆ ನಿವೃತ್ತಿ ನಂತರ ಪಕ್ಷಕ್ಕೆ ಬಂದಿದ್ದೇನೆ ಎಂದು  ಡಾ. ಸಿದ್ದರಾಮಯ್ಯ ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com