ಆನಂದ್ ಅಸ್ನೋಟಿಕರ್
ರಾಜಕೀಯ
ಅನಂತಕುಮಾರ್ ಹೆಗಡೆ ಒಬ್ಬ ಲೋಫರ್: ಆನಂದ್ ಅಸ್ನೋಟಿಕರ್ ಮತ್ತೆ ಸಮರ್ಥನೆ
ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಒಬ್ಬ ಲೋಫರ್, ದೇಶಕಂಡ ನಾಲಾಯ್ಕ್ ಎಂದು ನಾನು ಈ ಹಿಂದೆ...
ಕಾರವಾರ: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಒಬ್ಬ ಲೋಫರ್, ದೇಶಕಂಡ ನಾಲಾಯ್ಕ್ ಎಂದು ನಾನು ಈ ಹಿಂದೆ ಹೇಳಿಕೆ ನೀಡಿದ್ದೆ. ಈಗ ಆ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದೇನೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಆನಂದ್ ಅಸ್ನೋಟಿಕರ್ ಅವರು, ಅನಂತಕುಮಾರ್ ಹೆಗಡೆ ಅವರು ರಾಜಕೀಯಕ್ಕೆ ಸೇವೆ ಮಾಡಲು ಬಂದಿಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಸಮಾಜ ಸೇವೆ ರಾಜಕೀಯದ ಬುನಾದಿ. ಆದರೆ ಅನಂತಕುಮಾರ್ ಹೆಗಡೆ ಸಮಾಜ ಸೇವೆ ಮಾಡಲು ಬಂದಿಲ್ಲ ಎನ್ನುತ್ತಿದ್ದಾರೆ ಎಂದರು.
ಅನಂತಕುಮಾರ್ ಹೆಗಡೆ ಮಾಧ್ಯಮಗಳಿಗೆ ಏನು ಬೇಕಾದರೂ ಬರೆಯಿರಿ ಎನ್ನುವ ಮೂಲಕ ಮಾಧ್ಯಮಕ್ಕೆ ಅಪಚಾರ ಮಾಡುತ್ತಿದ್ದಾರೆ. ಏನು ಬೇಕಾದರೂ ಬರೆಯುವುದು ಮಾಧ್ಯಮದ ಕೆಲಸಾನಾ? ಎಂದು ಪ್ರಶ್ನಿಸಿದರು.
ಪರೇಶ್ ಮೆಸ್ತಾ ಸಾವಿನ ಮೇಲೆ ರಾಜಕೀಯ ಮಾಡುತ್ತಿರುವ ಅನಂತಕುಮಾರ್ ಹೆಗಡೆ, ಹಿಂದೂಳಿದ ವರ್ಗದ ಯುವಕರ ಕೈಗೆ ಕತ್ತಿ ಕೊಟ್ಟಿದ್ದಾರೆ. ಆ ಯುವಕರ ಮೇಲಿನ ಪ್ರಕರಣಗ ಬಗ್ಗೆ ಅವರು ಈಗ ಮಾತನಾಡುತ್ತಿಲ್ಲ ಎಂದು ಆನಂದ್ ಅಸ್ನೋಟಿಕರ್ ಆರೋಪಿಸಿದರು.
ನೀಚ ನಾಲಾಯಕ್ ಸಚಿವ ಅಂತ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಸಚಿವ ಹೆಗಡೆ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ