ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಛಾನದಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಬಹುಜನ ಸಮಾಜ ಪಕ್ಷ ಹಿಂಪಡೆದ ಬೆನ್ನಲ್ಲೇ ರಾಜ್ಯದಲ್ಲಿ ಆ ಪಕ್ಷದ ಶಾಸಕರಾಗಿ ಸಮ್ಮಿಶ್ರ ಸರ್ಕಾರದಲ್ಲಿ ಪಾಲ್ಗೊಂಡಿದ್ದ ಮಹೇಶ್ ಅವರು ಅಂತಹುದೇ ನಿರ್ಧಾರವನ್ನು ಕೈಗೊಂಡಿರುವುದು, ಇದೀಗ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಚುನಾವಣಾ ಯೋಜನೆಗಳ ಮೇಲೆ ಭಾರೀ ಹೊಡೆತ ನೀಡಿದಂತಾಗಿದೆ.