ಗುರುವಾರ ಪಕ್ಷದ ಕಾರ್ಯಕರ್ತರ ಜೊತೆಗೆ ಕಾಂಗ್ರೆಸ್ ಎಂಎಲ್ ಸಿ.ಎಂ ಲಿಂಗಪ್ಪ ಸಭೆ ನಡೆಸಿ ರಾಮನಗರದಿಂದ ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸುವಂತೆ ಒತ್ತಾಯಿಸಿದ್ದಾರೆ. ನಾವು ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ದರಿದ್ದೇವೆ, ಆದರೆ ಜೆಡಿಎಸ್ ಅಭ್ಯರ್ಥಿ ಪರ ಮಾತ್ರ ಪ್ರಚಾರ ಮಾಡುವುದಿಲ್ಲ, ರಾಮನಗರದಲ್ಲಿ ಕಾಂಗ್ರೆಸ್ ಭದ್ರವಾಗಿದೆ, ಪಕ್ಷದ ಅಭ್ಯರ್ಥಿ ಗೆಲ್ಲುವ ಅವಕಾಶಗಳು ಹೆಚ್ಚಿವೆ,ಇದು ಪಕ್ಷದ ಕಾರ್ಯಕರ್ತರ ಅಭಿಪ್ರಾಯ. ಕಾರ್ಯಕರ್ತರ ಭಾವನೆಗಳನ್ನು ನಾಯಕರು ಅರ್ಥ ಮಾಡಿಕೊಳ್ಳದಿದ್ದರೇ ಮುಂದೆ ಏನು ಎಂಬ ಬಗ್ಗೆ ನಾವು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಲಿಂಗಪ್ಪ ಹೇಳಿದ್ದಾರೆ.