ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ದಿನೇಶ್ ಗುಂಡೂರಾವ್ ಅವರು, ಬಳ್ಳಾರಿಯಲ್ಲಿ ಗೆಲವು ಸಾಧಿಸಲು ಕಾಂಗ್ರೆಸ್ ಸಿದ್ಧತೆಗಳನ್ನು ನಡೆಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷ ಬಲಿಷ್ಟವಾಗಿದೆ. ನಮ್ಮ 6 ಶಾಸಕರು ಒಗ್ಗಟ್ಟಿನಿಂದ ಇದ್ದು, ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸಿ ಶೀಘ್ರದಲ್ಲಿಯೇ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುತ್ತದೆ ೆಂದು ಹೇಳಿದ್ದಾರೆ.