ಯಾವ ಪುರುಷಾರ್ಥಕ್ಕೆ ಎಚ್ ಎಎಲ್ ನಲ್ಲಿ ರಾಹುಲ್ ಸಂವಾದ: ಶೋಭಾ ಕರಂದ್ಲಾಜೆ ಲೇವಡಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯಾವ ಪುರಷಾರ್ಥಕ್ಕಾಗಿ ಎಚ್​ಎಎಲ್​ ನೌಕರರೊಂದಿಗೆ ಸಂವಾದ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಶೋಭಾ ...
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯಾವ ಪುರಷಾರ್ಥಕ್ಕಾಗಿ ಎಚ್​ಎಎಲ್​ ನೌಕರರೊಂದಿಗೆ ಸಂವಾದ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಹುಲ್ ಹೋದ ಕಡೆಯಲ್ಲೆಲ್ಲ ಒಂದೊಂದು ಅಂಕಿ ಅಂಶ ಕೊಟ್ಟು ಬರುತ್ತಿದ್ದಾರೆ. ಈಗಾಗಲೇ ರಾಫೇಲ್ ವಿಮಾನಗಳ ಖರೀದಿ ಬಗ್ಗೆ ಸಂಸತ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದೇವೆ. ಆದರೂ ಕೂಡ ಅವರು ರಾಫೇಲ್ ವಿಮಾನ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡ್ತಿದ್ದಾರೆ ಆರೋಪಿಸಿದರು. 
ರಾಹುಲ್ ಗಾಂಧಿ ರಫೇಲ್ ಒಪ್ಪಂದವನ್ನು ಮುಂದಿಟ್ಟುಕೊಂಡು ಸಭೆ ನಡೆಸುತ್ತಿದ್ದಾರೆ. ಯಾವ ಪುರುಷಾರ್ಥಕ್ಕಾಗಿ ಸಂವಾದ ನಡೆಸ್ತಿದ್ದಾರೆ ಎದು ಪ್ರಶ್ನಿಸಿದ್ದಾರೆ.
ಸೈನ್ಯಕ್ಕೆ ಬೇಕಾದ ಅಗತ್ಯ ವಸ್ತುಗಳು ನಮ್ಮಲ್ಲಿ ಕಳೆದ 70 ವರ್ಷಗಳಲ್ಲಿ ಸರಿಯಾಗಿ ಪೂರೈಕೆ ಮಾಡಿಲ್ಲ. ಆದರೆ ಈಗ ಸರ್ಕಾರದ ರಫೇಲ್ ಯುದ್ಧ ವಿಮಾನ ಖರೀದಿಸಿದರೆ ಸಂಶಯ ಹುಟ್ಟು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com