ಜೆಡಿಎಸ್ ಅಭ್ಯರ್ಥಿ ಫೈನಲ್: ಶಿವಮೊಗ್ಗದಿಂದ ಮಧು ಬಂಗಾರಪ್ಪ, ಮಂಡ್ಯದಿಂದ ಶಿವರಾಮೇಗೌಡ ಸ್ಪರ್ಧೆ

ನವೆಂಬರ್ 3ರಂದು ನಡೆಯುವ ಉಪ ಚುನಾವಣೆಗೆ ಮಂಡ್ಯ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ....
ಎಲ್,ಆರ್ ಶಿವರಾಮೇಗೌಡ ಮತ್ತು ಮಧು ಬಂಗಾರಪ್ಪ
ಎಲ್,ಆರ್ ಶಿವರಾಮೇಗೌಡ ಮತ್ತು ಮಧು ಬಂಗಾರಪ್ಪ
Updated on
ಬೆಂಗಳೂರು: ನವೆಂಬರ್ 3ರಂದು ನಡೆಯುವ ಉಪ ಚುನಾವಣೆಗೆ ಮಂಡ್ಯ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ.
ಶಿವಮೊಗ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ  ಮಧು ಬಂಗಾರಪ್ಪ ಮತ್ತು ಮಂಡ್ಯ ಕ್ಷೇತ್ರಕ್ಕೆ ಎಲ್ ಆರ್ ಶಿವರಾಮೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. 
ಹೀಗಾಗಿ ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಮಧು ಬಂಗಾರಪ್ಪ ನಡುವೆ ನೇರ ಹಣಾಹಣಿ ಏರ್ಪಡಲಿದೆ.
ಮಂಡ್ಯದಲ್ಲೂ ಜೆಡಿಎಸ್‌ ಟಿಕೆಟ್‌ಗಾಗಿ ಏರ್ಪಟ್ಟಿದ್ದ ಪೈಪೋಟಿಗೆ ತೆರೆಬಿದ್ದಿದ್ದು, ಶಿವರಾಮೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com