ಪಕ್ಷ ತೊರೆಯುವುದಾಗಿ ಬೆದರಿಕೆ ಹಾಕಿದ್ದ ಎಂಎಲ್ ಸಿ ಯಿಂದ ಸಿದ್ದರಾಮಯ್ಯಗೆ ಪತ್ರ

ಕಾಂಗ್ರೆಸ್ ನಾಯಕರ ನಡೆಯಿಂದ ಬೇಸತ್ತು ಅಸಮಾಧಾನ ತೋರ್ಪಡಿಸಿದ್ದ ಕಾಂಗ್ರೆಸ್ ಎಂಎಲ್ ಸಿ ರಘು ಆಚಾರ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on
ಬೆಂಗಳೂರು: ಕಾಂಗ್ರೆಸ್ ನಾಯಕರ ನಡೆಯಿಂದ ಬೇಸತ್ತು  ಅಸಮಾಧಾನ ತೋರ್ಪಡಿಸಿದ್ದ ಕಾಂಗ್ರೆಸ್ ಎಂಎಲ್ ಸಿ ರಘು ಆಚಾರ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯಗೆ ಪತ್ರ ಬರೆದಿರುವ ಪರಿಷತ್ ಸದಸ್ಯ ರಘು ಆಚಾರ್, ಶಾಸಕರ ಕ್ಷೇತ್ರಾಭಿವೃದ್ದಿ ಅನುದಾನ, ಸಮ್ಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿ ಮುಂದುವರೆಯುವ ವಿಚಾರ, ಕ್ಷೇತ್ರದ ಅಭಿವೃದ್ದಿ ಕುಂದುಕೊರತೆಗಳನ್ನ ಆಲಿಸುವು ಸೇರಿದಂತೆ ಎಲ್ಲಾ ವಿಷಯಗಳನ್ನ ಚರ್ಚಿಸಲು  ಶಾಸಕಾಂಗ ಸಭೆ ಕರೆಯಬೇಕು. ಒಂದು ದಿನದ ಜಂಟಿ ಅಧಿವೇಶನ ಕರೆಯಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮೆಡಿಕಲ್ ಕಾಲೇಜನ್ನ ಚಿತ್ರದುರ್ಗದಿಂದ ಕನಕಪುರಕ್ಕೆ ಸ್ಥಳಾಂತರಿಸಿರುವುದಕ್ಕೆಹಾಗೂ ಈ ಬಗ್ಗೆ ಕ್ಷೇತ್ರದ ಅಭಿವೃದ್ದಿ ಬಗ್ಗೆ ಚರ್ಚಿಸಲು ಸಿಎಂ ಭೇಟಿಗೆ ಅವಕಾಶ ಕೇಳಿದರೂ ಅನುಮತಿ ನೀಡುತ್ತಿಲ್ಲ ಎಂದು  ರಘು ಆಚಾರ್ ಅಸಮಾಧಾನ ಗೊಂಡಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com