ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಲಿಂಗಾಯತ ಪ್ರತ್ಯೇಕ ಧರ್ಮ ಕಾರಣ: ಡಿಕೆಶಿ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕಾರಣ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ...
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕಾರಣ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನಕ್ಕೆ ಹಾಗೂ ಫಲಿತಾಂಶ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ಧರ್ಮ ಇರಬಹುದು, ಆದರೆ ಧರ್ಮದಲ್ಲಿ ರಾಜಕಾರಣ  ಇರಬಾರದು ಎಂದು ಶಿವಕುಮಾರ್ ತಿಳಿಸಿದ್ದಾರೆ.  ಮೇ 12 ರಂದು ನಡೆದ  ರಾಜ್ಯ.ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 79 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು, ಬಿಜೆಪಿ 104 ಸೀಟು ಗೆದ್ದಿತ್ತು. 
ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬಾರದು, ಮಾಡಿದರೇ ಯಾವ ಫಲಿತಾಂಶ ಬರುತ್ತದೆ ಎಂಬುದಕ್ಕೆ ಕಳೆದ ವಿಧಾನಸಭೆ ಚುನಾವಣೆ ಜ್ವಲಂತ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com