ನಾಮಪತ್ರ ಸಲ್ಲಿಸಿದ ಬಳಿಕ ಶ್ರೀರಾಮುಲು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ತಿಪ್ಪೇಸ್ವಾಮಿ ಅವರು, ಶ್ರೀರಾಮುಲು ನಾಯಕ ಜನಾಂಗದವರೇ ಅಲ್ಲ. ಕರ್ನಾಟಕದವರೇ ಅಲ್ಲ. ಅವರು ಆಂಧ್ರ ಪ್ರದೇಶದ ಬೊಯಸ್ ಜನಾಂಗದವರು. ರಾಜಕೀಯ ಹಿತಾಸಕ್ತಿಗೆ ತಾವು ನಾಯಕ ಜನಾಂಗವರು ಅಂತಾ ಹೇಳಿಕೊಳ್ಳುತ್ತಿದ್ದಾರೆ. ಆದರೆ ಅದು ಸತ್ಯಕ್ಕೆ ದೂರವಾದ ಮಾತು. ಅವರು ಸುಳ್ಳು ಪ್ರಮಾಣ ಪತ್ರಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿದ್ದರು.