'ಯಾವ ಕಾರಣಕ್ಕಾಗಿ ಡಿಕೆಶಿಯವರು ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಅದು ಅವರ ವೈಯಕ್ತಿಕ ಹೇಳಿಕೆ ಎಂದುಕೊಂಡಿದ್ದೇನೆ. ಹಿಂದಿನ ಸಿಎಂ ಸಿದ್ದರಾಮಯ್ಯರ ನೇತೃತ್ವದ ಸಚಿವ ಸಂಪುಟದಲ್ಲಿ ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆ ನಿರ್ಣಯಕ್ಕೆ ಭಿನ್ನಾಭಿಪ್ರಾಯವಿದ್ದರೂ, ಪಕ್ಷದ ನಿರ್ಧಾರವಾಗಿರುವುದರಿಂದ ಅದಕ್ಕೆ ಸಹಮತ ವ್ಯಕ್ತಪಡಿಸಲೇಬೇಕು. ಅಲ್ಲದೆ, ಒಂದು ನಿರ್ಣಯ ತೆಗೆದುಕೊಳ್ಳುವಾಗ ಎಲ್ಲರ ವೈಯಕ್ತಿಕ ಅಭಿಪ್ರಾಯವನ್ನೂ ತೆಗೆದುಕೊಳ್ಳಲಾಗುತ್ತದೆ. ಹಾಗೆಯೇ, ಡಿಕೆಶಿಯವರಿಂದಲೂ ಅಭಿಪ್ರಾಯ ಪಡೆದು ಅಂತಿಮವಾಗಿ ಸ್ವತಂತ್ರ ಧರ್ಮದ ಮಾನ್ಯತೆಗೆ ಶಿಫಾರಸು ಮಾಡಲಾಗಿದೆ. ಈ ವಿಷಯವನ್ನು ಮತ್ತೆ ಚರ್ಚಿಸುವ ಬದಲು, ಇಲ್ಲಿಗೆ ಬಿಡುವುದು ಉತ್ತಮ' ಎಂದರು.