ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಅವರನ್ನು ಸೆಳೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಇದರಂತೆ ಚಂದ್ರಶೇಖರ್ ಅವನ್ನೇ ಅಭ್ಯರ್ಥಿಯನ್ನಾಗಿ ಕಣಕ್ಕಳಿಸಿಲು ಮುಂದಾಗಿದೆ. ಹೀಗಾಗಿ ಸ್ಥಳೀಯವಾಗಿ ಲಿಂಗಪ್ಪ ಅವರು ಇದ್ದರೆ, ಬಿಜೆಪಿಗೆ ಪರೋಕ್ಷವಾಗಿ ಬೆಂಬಲ ನೀಡುವ ಸಾಧ್ಯತೆಗಳಿರುವ ಶಂಕೆಯಿಂದಾಗಿ ಲಿಂಗಪ್ಪ ಅವರು ಚುನಾವಣೆ ಮುಕ್ತಾಯಗೊಳ್ಳುವವರೆಗೂ ರಾಮನಗರದಲ್ಲಿರಬಾರದೆಂದು ಬಳ್ಳಾರಿ ಕಚೇರಿ ಉಸ್ತುವಾರಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.