ಲಿಂಗಾಯತ ಧರ್ಮಕದ ಕುರಿತು ಡಿ.ಕೆ.ಶಿವಕುಮಾರ್ ಅವರು ನೀಡಿರುವುದು ಅವರ ವೈಯಕ್ತಿಕ ಹೇಳಿಕೆ. ಆದರೆ, ಈ ಬಗ್ಗೆ ಆಕ್ಷೇಪ ಇದ್ದಿದ್ದರೆ, ಸಚಿವ ಸಂಪುಟ ಸಭೆಯಲ್ಲಿಯೇ ಚರ್ಚೆ ಮಾಡಬಹುದಿತ್ತಲ್ಲವೇ? ಯಾಕೆ ಮೌನ ವಹಿಸಿದ್ದರು? ಇದೀಗ ಬಹಿರಂಗ ಹೇಳಿಕೆ ನೀಡುವ ಉದ್ದೇಶವೇನು? ಅವರ ಹಿಂಬಾಲಕರಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವಾಗ ಶಿವಕುಮಾರ್ ಎಲ್ಲಿಗೆ ಹೋಗಿದ್ದರು? ಪ್ರತಿ ಸಭೆಯಲ್ಲಿ ಮಾತನಾಡಿದರೂ ಏಕೆ ತಡೆಯಲಿಲ್ಲ ಎಂದು ಪ್ರಶ್ನಿಸಿದ್ದಾರೆ.