ಅಭಿಪ್ರಾಯ ಹಾಗೂ ಭಿನ್ನಾಭಿಪ್ರಾಯಗಳು ಸಾಮಾನ್ಯ. ಅದನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚೆ ಮಾಡುತ್ತೇವೆ. ಇಬ್ಬರು ಮುಖಂಡರ ನಡುವೆ ಭಿನ್ನಾಭಿಪ್ರಾಯವಿದೆ. ಇದು ವೈಯಕ್ತಿಕ ಭಿನ್ನಾಭಿಪ್ರಾಯವಾಗಿದ್ದು, ಮಾತುಕತೆ ಮೂಲಕ ಬಗೆಹರಿಸುತ್ತೇವೆ. ಇಬ್ಬರು ಮುಖಂಡರ ನಡುವಿನ ಭಿನ್ನಾಭಿಪ್ರಾಯ ವಿಚಾರದಲ್ಲಿ ಪಕ್ಷದ ನಿಲುವು ಏನೂ ಇಲ್ಲ. ರಮೇಶ್ ಜಾರಕಿಹೊಳಿ ಜೊತೆ ನಾನು ಮಾತನಾಡುತ್ತೇನೆ. ಎಲ್ಲವನ್ನೂ ಸರಿಪಡಿಸುತ್ತೇನೆಂದು ತಿಳಿಸಿದ್ದಾರೆ.