ಅಂತೆಯೇ, 'ಬಿಜೆಪಿ ಸರ್ಕಾರದಲ್ಲಿ ಗಣಿ ಅದಿರು ಲೂಟಿ ಹೊಡೆದಿದ್ದು ಬಿಟ್ಟರೆ ಬೇರೇನು ಕೊಡುಗೆ ಕೊಟ್ಟಿಲ್ಲ. ನಾನು ಹೂವಿನಹಡಗಲಿಯಲ್ಲಿ ಮಾತನಾಡುವಾಗ ಹೇಳಿದ್ದೆ ಶ್ರೀರಾಮುಲುಗೆ 371 ಜೆ ಗೊತ್ತಿಲ್ಲ ಎಂದು. ಅವರಿಗೆ ಗೊತ್ತಿರೋದು 307, 302, 420 ಅಂತಹ ಐಪಿಸಿ ಸೆಕ್ಷನ್ಗಳು ಮಾತ್ರ ಎಂದಿದ್ದೆ. ನಾನೂ ಲೋಕಸಭೆಯಲ್ಲಿ ಮಾತನಾಡಿದ್ದೀನಿ ಎನ್ನುವ ಅವರು ಅದೇನು ಮಾತನಾಡಿದ್ದರೋ ಎಂದು ನನಗಂತೂ ಗೊತ್ತಿಲ್ಲ. ಅವರಿಗೆ ಏನು ಗೊತ್ತಿದೆ ಎಂದು ಮಾತನಾಡುತ್ತಾರೆ? ಬಿಜೆಪಿ 371ಜೆ ಜಾರಿ ಅಸಾಧ್ಯ ಎಂದು ಹೇಳಿತ್ತು. ಈ ಇತಿಹಾಸ ನಿಮಗೆ ಗೊತ್ತೇನ್ರಿ ರಾಮುಲು? ಎಂದು ಪ್ರಶ್ನಿಸಿದರು.