ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ: ಬಿಎಸ್ ವೈ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕ ಶ್ರೀರಾಮುಲು ಅವರನ್ನು 420 ಎಂದು ಕರೆಯುವ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕ ಶ್ರೀರಾಮುಲು ಅವರನ್ನು 420 ಎಂದು ಕರೆಯುವ ಮೂಲಕ ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ. 
ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರದ ಭರಾಟೆಯಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಈ ತರಹದ ಮಾತುಗಳು ಅವರ ಘನತೆಗೆ ತಕ್ಕದ್ದಲ್ಲ. ಅವರು ಈ ಕೂಡಲೇ ಶ್ರೀರಾಮುಲು ಅವರನ್ನು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಸಿಎಂಗೆ ಸಲಹೆ ನೀಡಿದ್ದಾರೆ.
ಮೂರು ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಬಿಎಸ್ ವೈ, ಬಳ್ಳಾರಿ, ಶಿವಮೊಗ್ಗ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಈಗಾಗಲೇ ಗೆದ್ದಿದ್ದೇವೆ. ಹೆಚ್ಚು ಅಂತರದ ಗೆಲುವಿಗೆ ಪ್ರಯತ್ನ ನಡೆದಿದೆ ಎಂದರು.
ಆರೋಪ- ಪ್ರತ್ಯಾರೋಪಗಳಿಗೆ ಜನ ಮುಂದಿನ ತಿಂಗಳ 5ರಂದು ಉತ್ತರಿಸಲಿದ್ದಾರೆ. ಮಂಡ್ಯ ಪ್ರಚಾರದ ವೇಳೆ ನಿರೀಕ್ಷೆಗೂ ಮೀರಿ ಜನ ಸೇರಿದ್ದರು. ಚುನಾವಣೆಯ ಅಂತಿಮ ತೀರ್ಪು ಮತದಾರನದ್ದು. ಕುಮಾರಸ್ವಾಮಿ  ಮತ್ತವರ ವಿತ್ರಪಕ್ಷಗಳು ತಮ್ಮ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರೆಂದು ಸ್ಪಷ್ಟಪಡಿಸಲಿ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com