ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಸಿಬಿಐ ನಿರ್ದೇಶಕರನ್ನು ಏಕಾಏಕಿ ಕಿತ್ತುಹಾಕಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ಇಲ್ಲ. ಸಿಬಿಐ ನಿರ್ದೇಶಕರ ಆಯ್ಕೆ ಉನ್ನತ ಮಟ್ಟದ ಕೊಲಿಜಿಯಂ ವ್ಯವಸ್ಥೆಯಿಂದ ಆಗಿರುತ್ತದೆ. ಈ ಕೊಲಿಜಿಯಂನಲ್ಲಿ ಪ್ರಧಾನಿ, ಪ್ರತಿಪಕ್ಷ ನಾಯಕ ಮತ್ತು ಸಿಜೆಐ ಇರುತ್ತಾರೆ. ಸಿಬಿಐ ನಿರ್ದೇಶಕರ ವಿರುದ್ಧ ದೂರು ಬಂದರೆ ಕೊಲಿಜಿಯಂ ಪರಿಶೀಲಿಸಬೇಕಾಗುತ್ತದೆ. ಆದರೆ ಕೇಂದ್ರ ಸರ್ಕಾರ ಕೊಲಿಜಿಯಂನಲ್ಲಿ ಈ ವಿಚಾರ ಚರ್ಚಿಸದೆ ಸಿಬಿಐ ನಿರ್ದೇಶಕರನ್ನು ಕಿತ್ತುಹಾಕಿದ್ದು, ಈ ಸಂಬಂಧ ತಾವು ಪ್ರಧಾನಿಗೆ ಮೂರು ಪುಟಗಳ ಪತ್ರ ಬರೆದಿರುವುದಾಗಿ ತಿಳಿಸಿದರು.