ಮಂಡ್ಯ ಮತ್ತು ಶಿವಮೊಗ್ಗಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಾದ ಎಲ್ ಆರ್ ಶಿವರಾಮೇಗೌಡ ಮತ್ತು ಮಧು ಬಂಗಾರಪ್ಪ ಪರ ಸಿಎಂ ಕ್ಯಾಂಪೇನ್ ಆರಂಭಿಸಲಿದ್ದಾರೆ. ಭಾನುವಾರ ಬೆಳಗ್ಗೆ 10.45ಕ್ಕೆ ಶಿವಮೊಗ್ಗಕ್ಕೆ ಸಿಎಂ ಆಗಮಿಸಲಿದ್ದಾರೆ, ಶಿವಮೊಗ್ಗದ 8 ಸ್ಥಳಗಳಲ್ಲಿ ನಡೆಯುವ ರ್ಯಾಲಿಗಳಲ್ಲಿ ಸಿಎಂ ಭಾಗವಹಿಸಿಲಿದ್ದಾರೆ. ಸೋಮವಾರ ಮತ್ತು ಮಂಗಳವಾರ ಪ್ರಚಾರ ಕಾರ್ಯದಲ್ಲಿ ಪಾಲ್ಗೋಳ್ಳುವ ಸಿಎಂ ಬುಧವಾರ ಅಲ್ಲಿಂದ ಹೊರಡುವುದಕ್ಕೂ ಮುನ್ನ ಪತ್ರಿಕಾಗೋಷ್ಟಿ ನಡೆಸಲಿದ್ದಾರೆ, ನಂತರ ಅಲ್ಲಿಂದ ಮೈಸೂರಿಗೆ ತೆರಳಲಿದ್ದಾರೆ.