ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರಾಣಿ 25 ಸಾವಿರ ಮತಗಳಿಸಿದ್ದರು, ಕುಲಕರ್ಣಿ ಸಿದ್ದು ನ್ಯಾಮಗೌಡ ವಿರುಗ್ಘ 2,700 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಕುಲಕರ್ಣಿ ಅವರನ್ನು ಕಣಕ್ಕಿಳಿಸದಂತೆ ಹಲವರು ಒತ್ತಾಯ ಮಾಡಿದ್ದರು, ಈ ಎಲ್ಲಾ ಅಡೆತಡೆಗಳ ನಡುವೆ ಕುಲಕರ್ಣಿ ಅವರನ್ನು ಕಣಕ್ಕಿಳಿಸುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಶ್ರೀಕಾಂತ್ ಕುಲಕರ್ಣಿ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿದ್ದಾರೆ.