ಸಿದ್ದರಾಮಯ್ಯ ಹೇಳಿದ ತಕ್ಷಣವೇ ಯಾರನ್ನಾದರೂ ಜೈಲಿಗೆ ಕಳುಹಿಸಲು ಸಾಧ್ಯವೇ. ಅವರು ಜೈಲಿಗೆ ಹೋಗಿರುವುದು ಅವರು ಮಾಡಿದ ಅಕ್ರಮದಿಂದ. ಜನಾರ್ದನ ರೆಡ್ಡಿ ಸಂಸ್ಕೃತಿ, ಮಾನವೀಯತೆ ಗೊತ್ತಿಲ್ಲದ ವ್ಯಕ್ತಿ. ಕ್ರಿಮಿನಲ್ ಆಗಿ ಯೋಚನೆ ಮಾಡುವ ವ್ಯಕ್ತಿಗೆ ಅದೇ ರೀತಿಯ ಯೋಚನೆಗಳು ಬರುತ್ತದೆ. ಚುನಾವಣೆ ವೇಳೆ ಟೀಕೆ ಆರೋಪಗಳನ್ನು ಮಾಡುತ್ತೇವೆ. ಆದರೆ, ವೈಯಕ್ತಿಕವಾಗಿ ಕುಟುಂಬವನ್ನು ಗುರಿಯಾಗಿಸುವುದು ಒಳ್ಳೆಯದಲ್ಲ ಎಂದರು.