ಈ ಹಂತದಲ್ಲಿ ಫಿರೋಜ್ ಹಾಗೂ ರಮೇಶ್ ನಡುವೆ ತೀವ್ರ ವಾಕ್ಸಮರವೂ ನಡೆಯಿತು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಡಿ.ಕೆ.ಶಿವಕುಮಾರ್ ಮಧ್ಯಪ್ರವೇಶಿಸಲು ಮುಂದಾದಾಗ ರಮೇಶ್ ಜಾರಕಿಹೊಳಿ ಹಾಗೂ ಶಿವಕುಮಾರ್ ನಡುವೆಯೂ ಮಾತಿನ ಚಕಮಕಿ ನಡೆಯಿತು. ಕಾಂಗ್ರೆಸ್ ಘಟನಾಘಟಿ ನಾಯಕರಾದ ಸಿದ್ದರಾಮಯ್ಯ, ಪರಮೇಶ್ವರ್, ಶಿವಕುಮಾರ್ ಅವರ ಸಮ್ಮುಖದಲ್ಲಿಯೇ ತಾರಕ ಸ್ವರದಲ್ಲಿ ನಡೆದ ಈ ವಾಕ್ಸಮರವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ. ಪರಿಸ್ಥಿತಿ ಹತೋಟಿ ಮೀರುತ್ತಿದ್ದಂತೆಯೇ ವೇಣುಗೋಪಾಲ್ ಅವರು ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದರು ಎಂದು ಮೂಲಗಳಿ ತಿಳಿಸಿವೆ.