ಚಾಮುಂಡೇಶ್ವರಿ ಕ್ಷೇತ್ರದ ಸೋಲಿನಿಂದ ಇನ್ನು ಹೊರಬಾರದ ಸಿದ್ದರಾಮಯ್ಯಗೆ ಮತ್ತೊಂದು ಹಿನ್ನಡೆಯಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಶಾಸಕರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿತ್ತು, ಜೊತೆಗೆ ವಯಕ್ತಿಕವಾಗಿ ಸಿದ್ದರಾಮಯ್ಯ ಹಲವು ಸಭೆಗಳಲ್ಲಿ ಪಾಲ್ಗೊಂಡು ಖುದ್ದು ಹಾಜರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಮಾಡಿದ ತಪ್ಪು ಮತ್ತೆ ಇಲ್ಲಿ ಮರು ಕಳಿಸದಂತೆ ನೋಡಿಕೊಳ್ಳಲು ಸಿದ್ಧರಾಗಿದ್ದರು, ಆದರೆ ಸ್ಥಳೀಯ ಸಮಸ್ಯೆ, ಜಾತಿ ಮುಂತಾದ ಹಲವು ಕಾರಣಗಳಿಂದಾಗಿ ಸಿದ್ದರಾಮಯ್ಯ ಅಹಿಂದ ಕಾರ್ಡ್ ಪ್ಲೇ ಮಾಡಲು ವಿಫಲರಾಗಿದ್ದಾರೆ,