ಬಸನಗೌಡ ಪಾಟೀಲ್ ಯತ್ನಾಳ್
ರಾಜಕೀಯ
ಡಿಸಿಎಂ ಹುದ್ದೆ ಕೊಡ್ತೀವಿ ಬಿಜೆಪಿಗೆ ಬನ್ನಿ: ರಮೇಶ್ ಜಾರಕಿಹೊಳಿಗೆ ಯತ್ನಾಳ್ ಆಹ್ವಾನ
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗೆ ಕದನ ನಡೆಸುತ್ತಿರುವ ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ಶಾಸಕ ಬಸನಗೌಡ ಪಾಟೀಲ್ ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗೆ ಕದನ ನಡೆಸುತ್ತಿರುವ ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಸೇರ್ಪಡೆಗೊಳ್ಳುವಂತೆ ಆಹ್ವಾನಿಸಿದ್ದಾರೆ.
ಬಿಜೆಪಿಗೆ ಬನ್ನಿ ನಿಮಗೆ ಉಪಮುಖ್ಯಮಂತ್ರಿ ಹುದ್ದೆ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ, ಇನ್ನೂ ಮಾಜಿ ಸಚಿವ ಎಂ.ಬಿ ಪಾಟೀಲ್ ಗೂ ಅಹ್ವಾನ ನೀಡಿದ್ದಾರೆ, ಬಿಜೆಪಿಗೆ ಬಂದರೆ ಸಚಿವ ಸ್ಥಾನ ನೀಡುವುದಾಗಿ ಯತ್ನಾಳ್ ಆಶ್ವಾಸನೆ ಕೊಟ್ಟಿದ್ದಾರೆ.
ಒಂದು ವೇಳೆ ನಿಮಗೆ ಮಂತ್ರಿ ಹುದ್ದೆ ಬೇಕೆಂದರೇ, ಬಿಜೆಪಿ ಬನ್ನಿ ಎಂದು ಆಹ್ವಾನಿಸಿದ್ದಾರೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮೊದಲು ಸ್ಪಷ್ಟನೆ ನೀಡಲಿ, ಅವರು ವಿದೇಶಕ್ಕೆ ಹೊಗಿರುವುದು ಪ್ರವಾಸಕ್ಕೋ ಅಥವಾ ಸರ್ಕಾರ ಉರುಳಿಸುವುದಕ್ಕೋ ಎಂಬ ಬಗ್ಗೆ ವಿವರಿಸಲಿ ಎಂದು ಯತ್ನಾಳ್ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ