ರಾಜಕೀಯಕ್ಕೆ ಮೈಸೂರು ಮಹಾರಾಜ ಯಧುವೀರ್ ಎಂಟ್ರಿ? ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ತಂತ್ರ ಹೆಣೆದಿದ್ದು ಮೈಸೂರು ಮಹಾರಾಜರಾದ ಯಧುವೀರ್ ಒಡೆಯರ್...
ಯಧುವೀರ್ ಒಡೆಯರ್
ಯಧುವೀರ್ ಒಡೆಯರ್
ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ತಂತ್ರ ಹೆಣೆದಿದ್ದು ಮೈಸೂರು ಮಹಾರಾಜರಾದ ಯಧುವೀರ್ ಒಡೆಯರ್ ರನ್ನು ಮಂಡ್ಯದಲ್ಲಿ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. 
ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿದ್ದು ಹೀಗಾಗಿ ಮೈಸೂರು ರಾಜಮನೆತನವನ್ನು ಮಂಡ್ಯಕ್ಕೆ ಕರೆತರಲು ಬಿಜೆಪಿ ಸಿದ್ಧತೆ ನಡೆಸಿದ್ದು ಈ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ಮಣಿಸಲು ತಂತ್ರ ರೂಪಿಸುತ್ತಿದೆ. 
ಬಿಜೆಪಿಯು ಅದಾಗಲೇ ಯಧುವೀರ್ ಒಡೆಯರ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ. ಇನ್ನು ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಹ ಒಡೆಯರ್ ಅವರನ್ನೇ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. 
ಯಧುವೀರ್ ಅವರು ಮಂಡ್ಯದಿಂದ ಸ್ಪರ್ಧಿಸಿದರೆ ಸಕ್ಕರೆ ನಾಡಿನ ಜನರು ಅವರ ಕೈ ಹಿಡಿಯುವ ಸಾಧ್ಯತೆ ಹೆಚ್ಚು ಎಂಬ ವಿಚಾರ ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com