ಭಾರತ್ ಬಂದ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಬಂದ್'ಗೆ ಜೆಡಿಎಸ್, ಎಡಪಕ್ಷಗಳು ಕೂಡ ಬೆಂಬಲಿಸಿವೆ. ರಾಜ್ಯದಲ್ಲಿ ಹಲವು ಸಂಘಟನೆಗಳು ನಮಗೆ ಬೆಂಬಲಿಸಿವೆ. ವಾಟಾಳ್ ಪಕ್ಷ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆ, ರಾಜ್ ಕುಮಾರ್ ಸಂಘ, ಓಲಾ, ಉಬರ್, ಸಾರಿಗೆ ಯೂನಿಯನ್, ಖಾಸಗಿ ಟ್ಯಾಕ್ಸಿ, ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಸೇರಿದಂತೆ ಹಲವು ಸಂಘಟನೆಗಳು ಬಂದ್'ಗೆ ಬೆಂಬಲ ವ್ಯಕ್ತಪಡಿಸಿವೆ ಎಂದು ಹೇಳಿದ್ದಾರೆ.