ತೈಲೋತ್ಪನ್ನಗಳ ದರ ಏರಿಕೆ ಮತ್ತು ಭಾರತ್ ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಿನ್ನೆ ಕುದ್ರೋಳಿ ದೇವಾಲಯಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಪೂಜಾರಿ ಅವರು, 'ಬಂದ್ ಗೆ ಕರೆ ಕೊಟ್ಟವರು ಜಾಗೃತೆಯಾಗಿರಬೇಕು. ಕೇಂದ್ರ ಸರ್ಕಾರ ಈಗಾಗಲೇ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದೆ. ಆದರೂ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ನಿಂದಾಗಿ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಸ್ವತಃ ಸುಪ್ರೀಂ ಕೋರ್ಟ್ ಹೇಳಿದ್ದು, ಅದು ದೇಶ ವಿರೋಧಿ ನಡೆಯಾಗಿದೆ. ಬಂದ್ ಗೆ ಕರೆ ನೀಡೋದು ಭಾರೀ ಸುಲಭ. ಬಂದ್ ನಿಂದ ಆಗುವ ನಷ್ಟಕ್ಕೆ ಕರೆ ಕೊಟ್ಟವರೇ ಜವಾಬ್ದಾರರಾಗ್ತಾರೆ. ಬಂದ್ ಗೆ ಕರೆನೀಡಿದರೆ ಅದು ಕಾನೂನು ವಿರೋಧಿ ನಿಲುವಾಗುತ್ತದೆ. ದೇಶ ಮತ್ತು ರಾಜ್ಯ ಸರ್ಕಾರ ಸೆಸ್ ಕಮ್ಮಿ ಮಾಡಿದರೆ, ಅದರ ಲಾಭ ಜನರಿಗೆ ಸಿಗುತ್ತದೆ ಅನ್ನೋದು ತಪ್ಪು. ಹಿಂದೆ ನಾನೂ ಕೂಡ ಹಣಕಾಸು ಸಚಿವನಾಗಿದ್ದವನು, ಸೆಸ್ ಕಮ್ಮಿ ಮಾಡಿದರೆ ಸರ್ಕಾರ ನಡೆಯುವುದು ಹೇಗೆ. ಕಾಂಗ್ರೆಸ್ ಪಕ್ಷ ತಪ್ಪು ಮಾಡುತ್ತಿದೆ. ಹೀಗೆ ಮಾಡಿದರೆ ಒಂದು ದಿನವೂ ಕಾಂಗ್ರೆಸ್ ಗೆ ಸರ್ಕಾರ ಮಾಡೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.