ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್.ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮತ್ತು ಶಾಸಕ ಎಂ.ಪಿ.ರೇಣುಕಾಚಾರ್ಯ, ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಅವರ ಭಾರಕ್ಕೆ ಅವರೇ ಕುಸಿಯುತ್ತಿದ್ದಾರೆ. ಒಳಗೊಳಗೆ ಆದರೆ, ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿಯನ್ನು ಎಳೆತರುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ, ಒಂದೊಮ್ಮೆ ಸರ್ಕಾರ ಅಲ್ಪಮತಕ್ಕೆ ಕುಸಿದರೆ 104 ಶಾಸಕರನ್ನು ಹೊಂದಿರುವ ಬಿಜೆಪಿ ಕಡಲೇಕಾಯಿ ತಿನ್ನುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ, ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.