ಜಾರಿ ನಿರ್ದೇಶನಾಲಯದಲ್ಲಿ ತಮ್ಮ ವಿರುದ್ದದ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಡಿ. ಕೆ. ಶಿವಕುಮಾರ್ , ಆಹಾರದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಏಲ್ಲಿಯೂ ಓಡಿ ಹೋಗಿಲ್ಲ. ಜಾರಿ ನಿರ್ದೇಶನಾಲಯದಿಂದ ನಾನು ಯಾವುದೇ ನೋಟಿಸ್ ಪಡೆದಿಲ್ಲ. ಕಾನೂನು ಗೌರವಿಸುವ ನಾಗರಿಕನಾಗಿದ್ದು, ಯಾವಾಗಲೂ ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸಿದ್ದೇನೆ. ಯಾವುದೇ ರೀತಿಯ ಪರಿಣಾಮಗಳನ್ನು ಎದುರಿಸಲು ತಾನೂ ಸಿದ್ದವಿರುವುದಾಗಿ ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.ಕಾಂಗ್ರೆಸ್ ಪಕ್ಷದ ವರ್ಚಸ್ಸು ಹಾಳು ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಡಿ. ಕೆ. ಶಿವಕುಮಾರ್, ಬಿಜೆಪಿ ಸರ್ಕಾರ ರಚನೆ ಕನಸಿನ ಮಾತು ಎಂದರು.