ವಿಧಾನ ಪರಿಷತ್ ಚುನಾವಣೆ ನಂತರ ಅಂದರೇ ಅಕ್ಟೋಬರ್ 3 ರ ನಂತರ ಯಾವಾಗ ಬೇಕಾದರೂ ಸಂಪುಟ ವಿಸ್ತರಣೆ ನಡೆಯಬಹುದು , ಆದರೆ ಈ ಮೊದಲು ಸೆಪ್ಟಂಬರ್ ತಿಂಗಳ ಅಂತ್ಯದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಕೆ.ಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರು ಹೇಳಿದ್ದರು. ಸೆಪ್ಟಂಬರ್ ತಿಂಗಳ ಅಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡಬೇಕೆಂದು ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಿದ್ದೆವು. ಆದರೆ ಪರಿಷತ್ ಚುನಾವಣೆ ಇರುವುದರಿಂದ ಅಕ್ಟೋಬರ್ 3 ರ ನಂತರ ಯಾವ ಸಮಯದಲ್ಲಾದೂ ಸಂಪುಟ ವಿಸ್ತರಣೆ ಆಗಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಹೇಳಿದ್ದಾರೆ.