ಪರಮೇಶ್ವರ
ಪರಮೇಶ್ವರ

ಆಪರೇಷನ್ ಕಮಲ: ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರಿಂದ ಪರೇಡ್

ಪ್ರತಿಪಕ್ಷ ಬಿಜೆಪಿಯ ಆಪರೇಷನ್ ಕಮಲ ವಿರೋಧಿಸಿ ಕಾಂಗ್ರೆಸ್ - ಜೆಡಿಎಸ್ ಶಾಸಕರು ರಾಜ್ಯಪಾಲ ವಜುಭಾಯ್...
Published on
ಬೆಂಗಳೂರು: ಪ್ರತಿಪಕ್ಷ ಬಿಜೆಪಿಯ ಆಪರೇಷನ್ ಕಮಲ ವಿರೋಧಿಸಿ ಕಾಂಗ್ರೆಸ್ - ಜೆಡಿಎಸ್ ಶಾಸಕರು ರಾಜ್ಯಪಾಲ ವಜುಭಾಯ್ ವಾಲಾ ಅವರ ಮುಂದೆ ಪರೇಡ್ ನಡೆಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ಹೇಳಿದ್ದಾರೆ.
ಬಿಜೆಪಿ ಆಡಳಿತ ಪಕ್ಷದ ಶಾಸಕರ ಕುದುರೆ ವ್ಯಾಪಾರಕ್ಕೆ ಯತ್ನಿಸುತ್ತಿದ್ದು, ಇದನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಎಲ್ಲಾ ಶಾಸಕರು ರಾಜಭವನಕ್ಕೆ ತೆರಳಿ ದೂರು ಸಲ್ಲಿಸಲಿದ್ದಾರೆ ಎಂದು ಡಿಸಿಎಂ ತಿಳಿಸಿದ್ದಾರೆ.
ರಾಜ್ಯಪಾಲರ ಮುಂದೆ ಶಾಸಕರ ಪರೇಡ್ ನಡೆಸುವ ದಿನವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪರಮೇಶ್ವರ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ ಕಳೆದ ಸಚಿವ ಸಂಪುಟದಲ್ಲಿ ಪ್ರವಾಹ ಮತ್ತು ಬರ ಸೇರಿದಂತೆ ಹಲವು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ. ಆದರೆ ಪ್ರತಿಪಕ್ಷ ಬಿಜೆಪಿಗೆ ಅಭಿವೃದ್ಧಿ ಬೇಕಾಗಿಲ್ಲ. ಸರ್ಕಾರ ಅಸ್ಥಿರಗೊಳಿಸುವುದು ಅವರ ಗುರಿ ಎಂದು ಪರಮೇಶ್ವರ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com