ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರ ಪತನಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಆಪರೇಷನ್ ಕಾರ್ಯಾಚಾರಣೆ ನಡೆಸಲು ಯತ್ನಿಸುತ್ತಿದೆ ಎಂಬ ಊಹಾಪೋಹಗಳ ನಡುವೆ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಮತ್ತಿತರ ಶಾಸಕರ ಗುಂಪೊಂದು ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದ್ದು, ಚೆನ್ನೈಗೆ ಹೋಗಿದೆ ಎಂಬ ಮಾಹಿತಿ ಕೇಳಿಬಂದಿತ್ತು.
ಶಾಸಕ ಎಂ. ಟಿ. ಬಿ . ನಾಗರಾಜ್ ಮತ್ತಿತರ ಸ್ನೇಹಿತರೊಂದಿಗೆ ಡಾ. ಸುಧಾಕರ್ ಚೆನ್ನೈಗೆ ತೆರಳಿದ್ದಾರೆ ಎಂಬ ಸುದ್ದಿಗಳು ಹರಿದಾಡಿತ್ತು. ಈ ಎಲ್ಲಾ ಊಹಾಪೋಹಗಳಿಗೆ ಡಾ. ಸುಧಾಕರ್ ತಮ್ಮ ಟ್ವೀಟರ್ ನಲ್ಲಿ ತೆರೆ ಎಳೆದಿದ್ದಾರೆ.
Advertisement