ಜೆಡಿಎಸ್ನ ಇಬ್ಬರು ಮತ್ತು ಇಬ್ಬರು ಪಕ್ಷೇತರರು ಬಿಜೆಪಿ ಜತೆ ಕೈಜೋಡಿಸಿದ್ದರು. ಹೀಗಾಗಿ, ಚುನಾವಣೆಯು ತೀವ್ರ ಕುತೂಹಲ ಮೂಡಿಸಿತ್ತು. ಜೆಡಿಎಸ್ನ ಮಂಜುಳಾ ನಾರಾಯಣಸ್ವಾಮಿ, ದೇವದಾಸ್, ಪಕ್ಷೇತರ ಸದಸ್ಯರಾದ ರಮೇಶ್, ಕಾಂಗ್ರೆಸ್ನ ಆನಂದ್, ಅಶೋಕ್ ಅವರ ಜೊತೆ ಆಗಮಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ನ ಹಲವರು ಅವರತ್ತ ಧಾವಿಸಿ ಅವರ ಮನವೊಲಿಸುವ ಪ್ರಯತ್ನ ಮಾಡಿದರು.