ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ವೈಫಲ್ಯ ಅನುಭವಿಸಿದ ಬಳಿಕ ಬಿಜೆಪಿ ತನ್ನ ಬೆಂಗಳೂರು ಘಟಕದ ಕಾರ್ಯವೈಖರಿಯ ಸಮೀಪ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ. 2019 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ನಗರ ಘಟಕವನ್ನು ಹೆಚ್ಚು ಕ್ರಿಯಾಶೀಲಗೊಳಿಸುವ, ಪುನರುಜ್ಜೀವಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿರುವ ಬಿಜೆಪಿ ವೈಫಲ್ಯಗಳನ್ನು ಹಿಂದಿಕ್ಕಿ ಹೊಸ ಕಾರ್ಯಕ್ರಮ ರೂಪಿಸಲು ಮುಂದಾಗಿದೆ.ಇದಕ್ಕಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಉನ್ನತ ನಾಯಕರು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ.