ಹಗರಿಬೊಮ್ಮನಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಆಯೋಜಿಸಿದ್ದ ಕೃಷಿ ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡಾಯ ಶಾಸಕರಿಗೆ ಆಮಿಷವೊಡ್ಡಲು ಯತ್ನ ನಡೆಸಿತ್ತು. ಆದರೆ, ದೇಶದಾದ್ಯಂತ ಬಿಜೆಪಿ ತನ್ನ ಜನಪ್ರಿಯತೆಯನ್ನು ಕಳೆದುಕೊಳ್ಳುತ್ತಿರುವುದರಿಂದ ಬಂಡಾಯ ಶಾಸಕರು ಇದೀಗ ಆ ಪಕ್ಷದತ್ತ ತಿರುಗಿ ನೋಡಲು ಹಿಂಜರಿಯುತ್ತಿದ್ದಾರೆಂದು ಹೇಳಿದ್ದಾರೆ.