ಎಂಬಿ ಪಾಟೀಲ್ ಅವರು ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ತಾವು ಕಾರ್ಯನಿರ್ವಹಿಸಿದ ಜಲಸಂಪನ್ಮೂಲ ಖಾತೆಯನ್ನೇ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆ ಖಾತೆ ಡಿಕೆ ಶಿವಕುಮಾರ್ ಅವರ ಬಳಿಯಿದ್ದು, ಗೃಹ ಖಾತೆಯನ್ನು ನೀಡುವುದಾಗಿ ಕೈ ಮುಖಂಡರು ಭರವಸೆ ನೀಡಿದ್ದರು. ಆದರೆ ಉಪ ಮುಖ್ಯಮಂತ್ರಿ ಪರಮೇಶ್ವರ ಅವರು ಗೃಹ ಖಾತೆಯನ್ನು ಬಿಟ್ಟುಕೊಡದ ಹಿನ್ನೆಲೆಯಲ್ಲಿ ಖಾತೆ ಹಂಚಿಕೆ ವಿಳಂಬವಾಗಿತ್ತು.