ರಾಜೀನಾಮೆ ನೀಡಿರುವುದರಿಂದ ತಮ್ಮ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬೇಕು ಎಂಬ ವಾದವನ್ನು ಉಮೇಶ್ ಜಾಧವ್ ಮುಂದಿಟ್ಟಿದ್ದಾರೆ. ಈ ನಡುವೆ ಸುನಿಲ್ ವಲ್ಯಾಪುರೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಇನ್ನಿಲ್ಲದ ಲಾಬಿ ಮಾಡುತ್ತಿದ್ದಾರೆ. ಹೀಗಾಗಿ ಬಿಜೆಪಿಯ ವರಿಷ್ಠ ನಾಯಕರು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಯಾರಿಗೆ ಕೊಡುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.