ಲಿಂಗಾಯತ ಧರ್ಮವನ್ನು ಒಡೆಯುವ ಬಗ್ಗೆ ಎಂ.ಬಿ.ಪಾಟೀಲರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು ಬಹಿರಂಗವಾಗಿಯೇ ಸಾಬೀತಾಗಿದೆ. ಪ್ರಕರಣದಲ್ಲಿ ಯಾವುದೇ ಪಾತ್ರವಹಿಸದಿರುವ ಪತ್ರಕರ್ತ ಹೇಮಂತ್ ಕುಮಾರ್ ಅವರನ್ನು ಉದ್ದೇಶಪೂರ್ವಕವಾಗಿ ಪೊಲೀಸರು ಬಂಧಿಸಿದ್ದು ಖಂಡನೀಯ. ಡಿಜಿಪಿ ನೀಲಮಣಿ ರಾಜು ಅವರನ್ನು ಬಿಜೆಪಿ ನಿಯೋಗ ಈ ಬಗ್ಗೆ ಪ್ರಶ್ನಿಸಿದಾಗ, ಅವರು ಸಮರ್ಪಕ ಉತ್ತರವನ್ನು ನೀಡುವಲ್ಲಿ ತಡಬಡಾಯಿಸಿದ್ದನ್ನು ನೋಡಿದರೆ, ಗೃಹ ಸಚಿವರ ಸೂಚನೆಯಂತೆ ಹೇಮಂತ್ ಕುಮಾರ್ ಅವರನ್ನು ಬಂಧಿಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.