ರಾಜಕೀಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಈ ಬಗ್ಗೆ ಪಕ್ಷದ ಶಾಸಕರು, ಮುಖಂಡರೆಲ್ಲಾ ಸೇರಿ ತೀರ್ಮಾನವನ್ನು ಕೈಗೊಳ್ಳಬೇಕು. ಸಮಾನ ಮನಸ್ಕರೆಲ್ಲ ಈ ಸಂಬಂಧ ಚರ್ಚಿಸಲು ಮಂಗಳವಾರ ಖಾಸಗಿ ಹೊಟೇಲ್ವೊಂದರಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ಎಸ್.ಟಿ.ಸೋಮಶೇಖರ್ ಪಕ್ಷದ ಶಾಸಕರಿಗೆ, ನಿಗಮ ಮಂಡಳಿ ಅಧ್ಯಕ್ಷರಿಗೆ, ನಿಗಮ ಮಂಡಳಿ ವಂಚಿತ ಶಾಸಕರೂ ಸೇರಿದಂತೆ ಪಕ್ಷದ ಮುಖಂಡರಿಗೆ ಆಹ್ವಾನ ನೀಡಿದ್ದರು. ಸೋಮಶೇಖರ್ ಕರೆದ ಸಭೆ ಮೈತ್ರಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರ ಬಂಡಾಯದ ಮುನ್ಸೂಚನೆ ಎಂದು ವಿಶ್ಲೇಷಿಸಲಾಗಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದಲ್ಲಿ ಸಾಕಷ್ಟು ಚರ್ಚೆಗೆ ಇದು ಗ್ರಾಸವಾಗಿತ್ತು.