ಸಚಿವ ಸಂಪುಟ ರಚನೆ ವಿಳಂಬ: ಸಿಎಂ, ಬಿಜೆಪಿ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ

ವಿನಾಕಾರಣ ಮೈತ್ರಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಬಿಜೆಪಿಗರು ಸಚಿವ ಸಂಪುಟ ರಚನೆ ಮಾಡದೆ ಏಕೆ ವಿಳಂಬ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದ್ದಾರೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
ಹಾಸನ: ವಿನಾಕಾರಣ ಮೈತ್ರಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಬಿಜೆಪಿಗರು ಸಚಿವ ಸಂಪುಟ ರಚನೆ ಮಾಡದೆ ಏಕೆ ವಿಳಂಬ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದ್ದಾರೆ.
ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಸಕಲೇಶಪುರ ಮತ್ತು ಬೇಲೂರಿನ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕಲೇಶಪುರದಲ್ಲಿ ಸಂತ್ರಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ,ಅಲ್ಲದೆ ಪುನರ್ವಸತಿ ಕೇಂದ್ರಗಳನ್ನು ತೆರೆದು ಆಹಾರ ಪೂರೈಕೆ ಮಾಡಲಾಗುತ್ತದೆ. ನಾಳೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ಪರಿಸ್ಥಿತಯ ಅವಲೋಕನ ಮಾಡುತ್ತೇನೆ ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲೆಯಲ್ಲಿ ಆಗಿರುವ ಮಳೆ ನಷ್ಟದ ಮಾಹಿತಿ ಪಡೆದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡುತ್ತೇನೆ. ಶೀಘ್ರದಲ್ಲಿ ವಿಶೇಷ ಆದ್ಯತೆ ಮೇರೆಗೆ ಪ್ರವಾಹ ಸಂತ್ರಸ್ಥರಿಗೆ ಹಣ ಬಿಡುಗಡೆಗೆ ಮಾಡುವಂತೆ ಒತ್ತಾಯಿಸುತ್ತೇನೆ.ಬೆಳೆ ಹಾಗೂ ಮನೆ ಹಾನಿ ಪರಿಹಾರ ಬಿಡುಗಡೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದೇನೆ ಎಂದು ಅವರು ಇದೇ ವೇಳೆ ತಿಳಿಸಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com