ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಸಕಲೇಶಪುರ ಮತ್ತು ಬೇಲೂರಿನ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕಲೇಶಪುರದಲ್ಲಿ ಸಂತ್ರಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ,ಅಲ್ಲದೆ ಪುನರ್ವಸತಿ ಕೇಂದ್ರಗಳನ್ನು ತೆರೆದು ಆಹಾರ ಪೂರೈಕೆ ಮಾಡಲಾಗುತ್ತದೆ. ನಾಳೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ಪರಿಸ್ಥಿತಯ ಅವಲೋಕನ ಮಾಡುತ್ತೇನೆ ಎಂದು ಅವರು ಹೇಳಿದರು.