ನಗರದ ಜೆ ಪಿ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ನಿನ್ನೆಯೇ ಹೋಗಿದ್ದಾರೆ. ಯಾರೇ ಹೋದರೂ ಪ್ರವಾಹ ನಿಲ್ಲಿಸಲು ಸಾಧ್ಯವಿಲ್ಲ. ವರುಣನ ಆರ್ಭಟ ಹೆಚ್ಚಾಗಿದೆ. ಪ್ರವಾಹವನ್ನು ಒಂದೇ ದಿನಕ್ಕೆ ನಿಲ್ಲಿಸಲು ಆಗುವುದಿಲ್ಲ. ಆದರೆ ಅಗತ್ಯ ರಕ್ಷಣಾ ಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.