ಅಂದು ಅಮಿತ್ ಶಾ ಬಂಧಿಸಿದ್ದ ಕಾರಣಕ್ಕಾಗಿಯೇ ಇಂದು ಚಿದಂಬರಂ ಬಂಧನ - ಎಚ್ ಡಿ ದೇವೇಗೌಡ

ಅಂದು ಅಮಿತ್ ಷಾ ಅವರನ್ನು ಬಂಧಿಸಿದ್ದ ಕಾರಣಕ್ಕಾಗಿಯೇ ಇಂದು ಚಿದಂಬರಂ ಅವರ ಬಂಧನವಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ದೇವೇಗೌಡ
ದೇವೇಗೌಡ
Updated on

ಬೆಂಗಳೂರು: ಅಂದು ಅಮಿತ್ ಷಾ ಅವರನ್ನು ಬಂಧಿಸಿದ್ದ ಕಾರಣಕ್ಕಾಗಿಯೇ ಇಂದು ಚಿದಂಬರಂ ಅವರ ಬಂಧನವಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ. 

ಬೆಂಗಳೂರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿ.ಚಿದಂಬರಂ ಯುಪಿಎ ಸರ್ಕಾರದಲ್ಲಿ ಗೃಹಸಚಿವರಾಗಿದ್ದ ಸಂದರ್ಭದಲ್ಲಿ  ಗುಜರಾತ್ ನ ಗೃಹಸಚಿವರಾಗಿದ್ದ ಅಮಿತ್ ಷಾ ಅವರನ್ನು ಸೋಹ್ರಾಬುದ್ಧೀನ್ ಶೇಖ್ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ಬಂಧಿಸಿತ್ತು. ಅಮಿತ್ ಷಾ ಈಗ ಕೇಂದ್ರದಲ್ಲಿ ಗೃಹಸಚಿವರಾಗಿದ್ದಾರೆ. ಹೀಗಾಗಿ ಸಿಬಿಐ ಚಿದಂಬರಂ ಅವರನ್ನು ಬಂಧಿಸಿದೆ ಎಂದು ಹೇಳಲಾಗುತ್ತಿದೆ ಎಂದರು.   

ಐಎನ್‍ಎಕ್ಸ್ ಮೀಡಿಯಾ ಹಗರಣ  ಹಳೆಯ ಪ್ರಕರಣ. ಈ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಪ್ರಕರಣ ಹಾಗೂ ತಂದೆಯ ಬಂಧನದ ಕುರಿತು ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಬುಧವಾರ ಮಾತನಾಡಿರುವುದನ್ನು ಕೇಳಿದ್ದೇನೆ ಅಷ್ಟೆ. ಹಳೆಯ ಪ್ರಕರಣ ಈಗ ಏಕೆ ಈ ಹಂತಕ್ಕೆ ಹೋಗಿದೆಯೋ, ಇದು ಮುಂದೆ ಯಾವ ರೀತಿಯ ತಾರ್ಕಿಕ ಅಂತ್ಯ ಕಾಣುತ್ತದೆಯೋ ಗೊತ್ತಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com