ಮೈಸೂರು: 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್ ವಾಷ್ ಆಗಲಿದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಸಾದ್, ದುರಹಂಕಾರ ಹಾಗೂ ಉಡಾಫೆ ವರ್ತನೆ ತೋರುವ ಸಿದ್ದರಾಮಯ್ಯಗೆ ಈ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಈಗಾಗಲೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಹೀಗಾಗಿ ಉಪ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾಗಲಿದೆ ಎಂದು ಹೇಳಿದ್ದಾರೆ.
‘ದೋಸ್ತಿ ಹೆಸರಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ನವರು ರಚಿಸಿದ ಸರಕಾರ ದುಶ್ಮನ್ ಸರಕಾರವಾಗಿ ಬದಲಾಗಿ ಪತನವಾಯ್ತು. ಈಗ ಅಧಿಕಾರಕ್ಕಾಗಿ ತೆರೆಮರೆಯಲ್ಲಿ ಮತ್ತೆ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಇವರಿಗೆ ಮತದಾರರು ಪಾಠ ಕಲಿಸಲಿದ್ದಾರೆ’ ಎಂದು ಶ್ರೀನಿವಾಸ್ ಪ್ರಸಾದ್ ಹರಿಹಾಯ್ದರು.
Advertisement