ಎಚ್. ಡಿ . ಕುಮಾರಸ್ವಾಮಿ
ರಾಜಕೀಯ
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯ
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯವುಂಟಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯವುಂಟಾಗಿದೆ.
ಹವಾಮಾನ ವೈಪರೀತ್ಯದಿಂದ ಹಾಗೂ ಚುನಾವಣಾ ಪ್ರಚಾರಗಳಲ್ಲಿ ಸತತ ತೊಡಗಿಸಿಕೊಂಡಿದ್ದರಿಂದ ಜ್ವರ, ನೆಗಡಿ ಕೆಮ್ಮು ಉಂಟಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಚಿಕ್ಕಬಳ್ಳಾಪುರ ಪ್ರಚಾರದಲ್ಲಿ ಭಾಗಿಯಾಗಿದ್ದಾಗಲೇ ಗಂಟಲು ಕೆರೆತ ಹಾಗೂ ಶೀತವುಂಟಾಗಿತ್ತು.
ವಿಶ್ರಾಂತಿ ರಹಿತ ಸುತ್ತಾಟ, ಭಾಷಣದಿಂದ ಜ್ವರ ಹೆಚ್ಚಾಗಿದ್ದು, ಜಯದೇವ ಆಸ್ಪತ್ರೆಯಲ್ಲಿ ಇಂದು ತಪಾಸಣೆಗೊಳಗಾದರು. ಸುಮಾರು ಅರ್ಧಗಂಟೆ ಕುಮಾರಸ್ವಾಮಿ ಅವರನ್ನು ಪರಿಶೀಲಿಸಿದ ವೈದ್ಯರು, ನಾಲ್ಕು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
ವೈದ್ಯಕೀಯ ತಪಾಸಣೆ ಬಳಿಕ ಅವರು ತಮ್ಮ ಜೆ.ಪಿ ನಗರದ ನಿವಾಸಕ್ಕೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ