ಮಂಡ್ಯ ಜಿಲ್ಲೆಯಲ್ಲಿ ಖಾತೆ ತೆರೆದ ಬಿಜೆಪಿ: ಮಗನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಬಿಎಸ್ ವೈ!

ಜೆಡಿಎಸ್ ಭದ್ರಕೋಟೆ ಎಂದೇ ಜನಜನಿತವಾಗಿದ್ದ ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಮಗನಿಗೆ ಸಿಹಿ ತಿನ್ನಿಸುತ್ತಿರುವ ಮುಖ್ಯಮಂತ್ರಿಬಿಎಸ್ ವೈ
ಮಗನಿಗೆ ಸಿಹಿ ತಿನ್ನಿಸುತ್ತಿರುವ ಮುಖ್ಯಮಂತ್ರಿಬಿಎಸ್ ವೈ
Updated on

ಬೆಂಗಳೂರು: ಜೆಡಿಎಸ್ ಭದ್ರಕೋಟೆ ಎಂದೇ ಜನಜನಿತವಾಗಿದ್ದ ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಕೆ. ಆರ್. ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ , ಗೆಲುವಿನ ಸನ್ನಿಹಕ್ಕೆ ಬರುತ್ತಿದ್ದಂತೆಯೇ ಬೆಂಗಳೂರಿನ ನಿವಾಸದಲ್ಲಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರನಿಗೆ ಸಿಹಿ ತಿನ್ನಿಸಿ ಸಂಭ್ರಮ ಪಟ್ಟರು.

ಕೆ. ಆರ್. ಪೇಟೆ ಗೆಲುವಿನಲ್ಲಿ ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ.  ಈ ಕ್ಷೇತ್ರದಲ್ಲಿ ಚುನಾವಣಾ ಉಸ್ತುವಾರಿಯನ್ನು ಅವರೇ ವಹಿಸಿಕೊಂಡಿದ್ದರು. ತಮ್ಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಬಾಯಿಸುವ ಮೂಲಕ ತಾವೊಬ್ಬ ಭವಿಷ್ಯದ ಅತ್ಯುತ್ತಮ ಸಂಘಟನಗಾರ ಎಂಬುದನ್ನು ವಿಜಯೇಂದ್ರ ನಿರೂಪಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಹಾಗೂ ವಿಜಯೇಂದ್ರ ಅವರ ನೇತೃತ್ವದಲ್ಲಿ ಕೆ. ಆರ್ ಪೇಟೆಯ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮತ್ತೆ ಗೆಲುವು ಸಾಧಿಸುವಂತಾಗಿದ್ದು, ಬಿಜೆಪಿ ವಲಯದಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com