ಬೆಂಗಳೂರು: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಯ ನೀಡಿದ ಬೆನ್ನಿಗೇ ಗೆಲುವು ಸಾಧಿಸಿದ ಎಲ್ಲರಲ್ಲಿಯೂ ಮತ್ತೆ ಮಂತ್ರಿಸ್ಥಾನದ ಮೇಲೆ ಆಸೆ ಚಿಗುರಿದ್ದು, ಕೆ.ಆರ್.ಪುರ ಕ್ಷೇತ್ರದ ಬೈರತಿ ಬಸವರಾಜ್ ನಗರಾಭಿವೃದ್ಧಿ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ.
ಗೆಲುವು ಸಾಧಿಸಿದ ಖುಷಿಯಲ್ಲಿ ಬೈರತಿ ಬಸವರಾಜ್ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಬಳಿಕ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ಕೊಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನಮಗೆ ನೀಡಿದ ಮಾತನ್ನು ನೆರವೇರಿಸುವುದಾಗಿ ಅವರು ಹೇಳಿದ್ದರಿಂದ ನಗರಾಭಿವೃದ್ಧಿ ಖಾತೆ ಕೊಡುವಂತೆ ಕೇಳಿದ್ದೇನೆ. ಆದರೂ ಖಾತೆ ಹಂಚಿಕೆಯ ತೀರ್ಮಾನ ಮುಖ್ಯ ಮಂತ್ರಿಗಳ ವಿವೇಚನೆಗೆ ಬಿಟ್ಟ ವಿಷಯ ಎಂದರು.
Advertisement