ಕಾಂಗ್ರೆಸ್ ಮುಖಂಡರು
ಕಾಂಗ್ರೆಸ್ ಮುಖಂಡರು

ಹೊಸ ವರ್ಷಕ್ಕೆ ಎಐಸಿಸಿ ಪುನಾರಚನೆ : ರಾಜ್ಯದಿಂದ ಯಾರು ದಿಲ್ಲಿಗೆ ? ಉಳಿದವರು ಎಲ್ಲಿಗೆ ? 

ರಾಷ್ಟ್ರ ರಾಜಕಾರಣದಲ್ಲಿ ಅತ್ಯಂತ ಹಳೆಯ ಪಕ್ಷವಾಗಿದ್ದರೂ, ಕೇಂದ್ರದಲ್ಲಿ ಅಧಿಕೃತ ಪ್ರತಿಪಕ್ಷವಾಗಲೂ ಹೆಣಗಾಡುತ್ತಿರುವ ಕಾಂಗ್ರೆಸ್ ಎಐಸಿಸಿ ಮಟ್ಟದಲ್ಲಿ ಪಕ್ಷವನ್ನು ಪುನಾರಚನೆ ಮಾಡಲು ಸಿದ್ಧತೆ ನಡೆಸಿದೆ. 
Published on

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಅತ್ಯಂತ ಹಳೆಯ ಪಕ್ಷವಾಗಿದ್ದರೂ, ಕೇಂದ್ರದಲ್ಲಿ ಅಧಿಕೃತ ಪ್ರತಿಪಕ್ಷವಾಗಲೂ ಹೆಣಗಾಡುತ್ತಿರುವ ಕಾಂಗ್ರೆಸ್ ಎಐಸಿಸಿ ಮಟ್ಟದಲ್ಲಿ ಪಕ್ಷವನ್ನು ಪುನಾರಚನೆ ಮಾಡಲು ಸಿದ್ಧತೆ ನಡೆಸಿದೆ. 

ಹೀಗಾಗಿ ರಾಜ್ಯದಿಂದ ರಾಷ್ಟ್ರ ರಾಜಕಾರಣಕ್ಕೆ ಯಾರು ತೆರಳುತ್ತಾರೆ ಎನ್ನುವ ಕುತೂಹಲ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮೂಡಿದೆ.

ಹಂಗಾಮಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿಯವರ ಆರೋಗ್ಯ ಸಮಸ್ಯೆಯ ನಡುವೆಯೂ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡಿದ್ದು, ನೂತನ ವರ್ಷಾರಂಭದೊಳಗೆ ಎಐಸಿಸಿಯನ್ನು ಪುನಾರಚಿಸಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಯಾವ ನಾಯಕರು ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೋ, ಯಾರು ರಾಜ್ಯದಲ್ಲಿಯೇ ಉಳಿದುಕೊಳ್ಳುತ್ತಾರೋ ಎನ್ನುವ ಚರ್ಚೆ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.

ಈಗಾಗಲೇ ಎಐಸಿಸಿಯಲ್ಲಿ ರಾಜ್ಯದಿಂದ ಪಕ್ಷದ ಹಿರಿಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನ ಕಾರ್ಯದರ್ಶಿಯಾಗಿ ಮಹಾರಾಷ್ಟ್ರ ಉಸ್ತುವಾರಿಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಸ್.ಎನ್. ಬೋಸರಾಜ್, ವಿಧಾನ ಪರಿಷತ್ ಮಾಜಿ ಸದಸ್ಯ ಸಲೀಂ ಅಹಮದ್ ಹಾಗೂ ಯುವ ಘಟಕದ ಚಿಕ್ಕಮಗಳೂರು ಮೂಲದ ಸಂದೀಪ್ ಎಐಸಿಸಿ ಕಾರ್ಯದರ್ಶಿಗಳಾಗಿದ್ದಾರೆ. 

ಈಗ ಎಐಸಿಸಿ ಸಂಪೂರ್ಣ ಪುನಾರಚನೆ ಮಾಡಲು ಮುಂದಾಗಿರುವುದರಿಂದ ಹಾಲಿ ಕಾರ್ಯದರ್ಶಿಗಳಲ್ಲಿ ಯಾರನ್ನು ಮುಂದುವರೆಸುತ್ತಾರೆ ಹಾಗೂ ಯಾರನ್ನು ಕೈ ಬಿಡುತ್ತಾರೆ ಎನ್ನುವುದರ ಮೇಲೆ ಉಳಿದವರಿಗೆ ದೆಹಲಿ ರಾಜಕಾರಣದ ಬಾಗಿಲು ತೆರೆಯುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com